ಶಿಡ್ಲಘಟ್ಟ : ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ತಾಲೂಕಿನ ಅನೇಕ ಕಡೆ ಮರಳು ಮತ್ತು ಮಣ್ಣು ಸಾಗಾಟ ಮಾಡುತ್ತಿರುವ ಪ್ರಕರಣ ಕಂಡು ಬರುತ್ತಿದ್ದು, ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ತಹಸೀಲ್ದಾರ್ ಎನ್.ಗಗನಾ ಸಿಂಧು ಎಚ್ಚರಿಕೆ ನೀಡಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾಲ್ಲೂಕಿನ ಕಸಬಾ, ಜಂಗಮಕೋಟೆ, ಬಶೆಟ್ಟಹಳ್ಳಿ ಹಾಗೂ ಸಾದಲಿ ಹೋಬಳಿ ವ್ಯಾಪ್ತಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳಲ್ಲಿ ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ, ಇನ್ನು ಮುಂದೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಯಾರಾದರೂ ಮಣ್ಣನ್ನು ಅಕ್ರಮವಾಗಿ ಸಾಗಿಸಿದರೆ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 70ರ ಪಕಾರ ಮಣ್ಣು ಸಾಗಿಸುವ ವಾಹನ, ಯಂತ್ರ ಮತ್ತು ಅವುಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
Trending
- ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ
- ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ
- ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್
- ಚಿಮುಲ್ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ : ಕಾಂಗ್ರೆಸ್ ಮುಖಂಡ ರಾಜೀವ್ಗೌಡ ಹಾಗು ಆಂಜಿನಪ್ಪ (ಪುಟ್ಟು)
- ಕಲ್ಯಾಣಿ ತ್ಯಾಜ್ಯವನ್ನು ತೆರವುಗೊಳಿಸಲು ನಾಗರೀಕರ ಒತ್ತಾಯ
- ಪಂಚಾಯಿತಿಗೊಂದು ಗುಣಮಟ್ಟದ ಶಾಲೆ ನಿರ್ಮಾಣಕ್ಕೆ ಆದ್ಯತೆ
- ಸ್ವಾಮೀಜಿ ಮೇಲೆ ಹಲ್ಲೆ, ಗಾಯಗೊಂಡ ಸ್ವಾಮೀಜಿ ಆಸ್ಪತ್ರೆಗೆ ದಾಖಲು
